ಕಿನ್ನಿಗೋಳಿ ಸ್ವಾ ಮಿ ವಿವೇಕಾನಂದ ಸೇವಾಸಂಸ್ಥೆಯು ಕಳೆದ 10 ವರ್ಷದಿಂದ ಸಾಂಸ್ಕೃತಿಕ ಸಾಹಿತ್ಯಿಕ, ಅದ್ಯಾತ್ಮಿಕ ಧಾರ್ಮಿಕ , ಕ್ರೀಡಾ ಮತ್ತು ಸೇವಾ ಕಾರ್ಯಕ್ರಮಗಳನ್ನು ಮಾಡುತ್ತ ಬಂದಿದ್ದು ಇದೀಗ ಪ್ರತಿ ಗ್ರಾಮದಲ್ಲಿಯೂ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಸೇವಾ ಘಟಕಗಳನ್ನು ಆರಂಭಿಸಲಾಗುವುದು ಎಂದು ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್ ಅಧ್ಯಕ್ಷ ನಿಡ್ಡೋಡಿ ಚಾವಡಿ ಮನೆ ಡಾ| ಜಗನ್ನಾಥ ಶೆಟ್ಟಿ ಹೇಳಿದರು.
ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಘಟಕವನ್ನು ಗ್ರಾಮ ಮಟ್ಟದಲ್ಲಿ ಆರಂಭಿಸುವ ನಿಟ್ಟಿನಲ್ಲಿ ಜರಗಿದ ಪೂರ್ವಾಭಾವಿ ಸಭೆಯಲ್ಲಿ ಮಾತನಾಡಿದ ಅವರು ಸ್ವಾಮಿ ವಿವೇಕಾವಾಣಿಯಂತೆ ಮಾನವನ ಸೇವೆಯು ಮಾಧವ ಸೇವೆ ಯ ಪರಿಕಲ್ಪನೆಯಲ್ಲಿ ಪ್ರತಿ ಗ್ರಾಮ ಮಟ್ಟದಲ್ಲಿ ಧಾರ್ಮಿಕತೆಗೆ ಒತ್ತು ನೀಡುವ ನಿಟ್ಟಿನಲ್ಲಿ ಸತ್ಯನಾರಾಯಣ ಪೂಜೆ, ಶನಿ ಪೂಜೆ , ಹರಿಕಥೆ ಮಾಡಲಾಗುವುದು. ಸೇವಾ ಕಾರ್ಯಕ್ರಮಕ್ಕೆ ಗಟ್ಟಿ ಮಾಡಲು ವೈದ್ಯಕೀಯ ಶಿಬಿರ, ಸಮಾಜ ಮುಖಿ ಕಾರ್ಯಕ್ರಮ ಬಲ ಪಡಿಸಲು ಕೃಷಿ ಕಾರ್ಯಕ್ಕೆ ಸಲಹೆ ಮಾಹಿತಿ ಶಿಬಿರ ಅಗತ್ಯ ತುರ್ತು ಸೇವೆ ನೀಡುವ ಬಗ್ಗೆ ಇನ್ನಿತರ ಸೇವಾ ಕಾರ್ಯಕ್ರಮ ಮಾಡುವ ನಿಟ್ಟಿನಲ್ಲಿ ಗ್ರಾಮ ದಲ್ಲಿ ೩೦ ಜನರ ಸದೃಡ ತಂಡ ಕಟ್ಟಲಾಗುವುದು, ವಾರದ ಸಭೆ , ತಿಂಗಳ ಸಭೆ ಮುಂತಾದ ಪರಿಕಲ್ಪನೆ ಮಾಡಲಾಗುವುದು ಎಂದು ತಿಳಿಸಿದರು. ಸಂಚಾಲಕ ನರಸಿಂಹ ಮಡಿವಾಳ , ಪದ್ಮಿನಿ ವಸಂತ್, ಪ್ರಕಾಶ್ ಆಚಾರ್, ಸಂತೋಷ್ ದೇವಾಡಿಗ, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಸೀತಾರಾಮ ಶೆಟ್ಟಿ ಪ್ರಸ್ತಾವನೆಗೈದು,ಕಾರ್ಯಕ್ರಮ ನಿರೂಪಿಸಿದರು.
ಪ್ರೀತಿ-ಪ್ರೇಮದ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಯುವಕರನ್ನು ಪ್ರಶ್ನಿಸಿದ್ದ ವ್ಯಕ್ತಿಯನ್ನ ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ರಾಯಚೂರು…
ಆಡವಾಡುತ್ತಿದ್ದಾಗ ವಿದ್ಯುತ್ ತಗುಲಿ 9 ವರ್ಷದ ಬಾಲಕಿಯೋರ್ವಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಇಂಗಳಿ ಗ್ರಾಮದ…
ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹವು ಪತ್ತೆಯಾಗಿದ್ದು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಗಂಡಸು…
ರಾಜಕಾಲುವೆ ಮೇಲೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹುಚ್ಚಾಟ ನಡೆಸಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. ಕುಡಿದ…
ಜೀವನದಲ್ಲಿ ಜಿಗುಪ್ಸೆಗೊಂಡ ಅವಿವಾಹಿತ ಯುವಕನೋರ್ವನು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.…
ಸುಬ್ರಹ್ಮಣ್ಯ- ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…