ಕಿನ್ನಿಗೋಳಿ ಸ್ವಾ ಮಿ ವಿವೇಕಾನಂದ ಸೇವಾಸಂಸ್ಥೆಯು ಕಳೆದ 10 ವರ್ಷದಿಂದ ಸಾಂಸ್ಕೃತಿಕ ಸಾಹಿತ್ಯಿಕ, ಅದ್ಯಾತ್ಮಿಕ ಧಾರ್ಮಿಕ , ಕ್ರೀಡಾ ಮತ್ತು ಸೇವಾ ಕಾರ್ಯಕ್ರಮಗಳನ್ನು ಮಾಡುತ್ತ ಬಂದಿದ್ದು ಇದೀಗ ಪ್ರತಿ ಗ್ರಾಮದಲ್ಲಿಯೂ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಸೇವಾ ಘಟಕಗಳನ್ನು ಆರಂಭಿಸಲಾಗುವುದು ಎಂದು ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್ ಅಧ್ಯಕ್ಷ ನಿಡ್ಡೋಡಿ ಚಾವಡಿ ಮನೆ ಡಾ| ಜಗನ್ನಾಥ ಶೆಟ್ಟಿ ಹೇಳಿದರು.
ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಘಟಕವನ್ನು ಗ್ರಾಮ ಮಟ್ಟದಲ್ಲಿ ಆರಂಭಿಸುವ ನಿಟ್ಟಿನಲ್ಲಿ ಜರಗಿದ ಪೂರ್ವಾಭಾವಿ ಸಭೆಯಲ್ಲಿ ಮಾತನಾಡಿದ ಅವರು ಸ್ವಾಮಿ ವಿವೇಕಾವಾಣಿಯಂತೆ ಮಾನವನ ಸೇವೆಯು ಮಾಧವ ಸೇವೆ ಯ ಪರಿಕಲ್ಪನೆಯಲ್ಲಿ ಪ್ರತಿ ಗ್ರಾಮ ಮಟ್ಟದಲ್ಲಿ ಧಾರ್ಮಿಕತೆಗೆ ಒತ್ತು ನೀಡುವ ನಿಟ್ಟಿನಲ್ಲಿ ಸತ್ಯನಾರಾಯಣ ಪೂಜೆ, ಶನಿ ಪೂಜೆ , ಹರಿಕಥೆ ಮಾಡಲಾಗುವುದು. ಸೇವಾ ಕಾರ್ಯಕ್ರಮಕ್ಕೆ ಗಟ್ಟಿ ಮಾಡಲು ವೈದ್ಯಕೀಯ ಶಿಬಿರ, ಸಮಾಜ ಮುಖಿ ಕಾರ್ಯಕ್ರಮ ಬಲ ಪಡಿಸಲು ಕೃಷಿ ಕಾರ್ಯಕ್ಕೆ ಸಲಹೆ ಮಾಹಿತಿ ಶಿಬಿರ ಅಗತ್ಯ ತುರ್ತು ಸೇವೆ ನೀಡುವ ಬಗ್ಗೆ ಇನ್ನಿತರ ಸೇವಾ ಕಾರ್ಯಕ್ರಮ ಮಾಡುವ ನಿಟ್ಟಿನಲ್ಲಿ ಗ್ರಾಮ ದಲ್ಲಿ ೩೦ ಜನರ ಸದೃಡ ತಂಡ ಕಟ್ಟಲಾಗುವುದು, ವಾರದ ಸಭೆ , ತಿಂಗಳ ಸಭೆ ಮುಂತಾದ ಪರಿಕಲ್ಪನೆ ಮಾಡಲಾಗುವುದು ಎಂದು ತಿಳಿಸಿದರು. ಸಂಚಾಲಕ ನರಸಿಂಹ ಮಡಿವಾಳ , ಪದ್ಮಿನಿ ವಸಂತ್, ಪ್ರಕಾಶ್ ಆಚಾರ್, ಸಂತೋಷ್ ದೇವಾಡಿಗ, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಸೀತಾರಾಮ ಶೆಟ್ಟಿ ಪ್ರಸ್ತಾವನೆಗೈದು,ಕಾರ್ಯಕ್ರಮ ನಿರೂಪಿಸಿದರು.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…