ಕಿನ್ನಿಗೋಳಿ ಸ್ವಾ ಮಿ ವಿವೇಕಾನಂದ ಸೇವಾಸಂಸ್ಥೆಯು ಕಳೆದ 10 ವರ್ಷದಿಂದ ಸಾಂಸ್ಕೃತಿಕ ಸಾಹಿತ್ಯಿಕ, ಅದ್ಯಾತ್ಮಿಕ ಧಾರ್ಮಿಕ , ಕ್ರೀಡಾ ಮತ್ತು ಸೇವಾ ಕಾರ್ಯಕ್ರಮಗಳನ್ನು ಮಾಡುತ್ತ ಬಂದಿದ್ದು ಇದೀಗ ಪ್ರತಿ ಗ್ರಾಮದಲ್ಲಿಯೂ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಸೇವಾ ಘಟಕಗಳನ್ನು ಆರಂಭಿಸಲಾಗುವುದು ಎಂದು ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್ ಅಧ್ಯಕ್ಷ ನಿಡ್ಡೋಡಿ ಚಾವಡಿ ಮನೆ ಡಾ| ಜಗನ್ನಾಥ ಶೆಟ್ಟಿ ಹೇಳಿದರು.
ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಘಟಕವನ್ನು ಗ್ರಾಮ ಮಟ್ಟದಲ್ಲಿ ಆರಂಭಿಸುವ ನಿಟ್ಟಿನಲ್ಲಿ ಜರಗಿದ ಪೂರ್ವಾಭಾವಿ ಸಭೆಯಲ್ಲಿ ಮಾತನಾಡಿದ ಅವರು ಸ್ವಾಮಿ ವಿವೇಕಾವಾಣಿಯಂತೆ ಮಾನವನ ಸೇವೆಯು ಮಾಧವ ಸೇವೆ ಯ ಪರಿಕಲ್ಪನೆಯಲ್ಲಿ ಪ್ರತಿ ಗ್ರಾಮ ಮಟ್ಟದಲ್ಲಿ ಧಾರ್ಮಿಕತೆಗೆ ಒತ್ತು ನೀಡುವ ನಿಟ್ಟಿನಲ್ಲಿ ಸತ್ಯನಾರಾಯಣ ಪೂಜೆ, ಶನಿ ಪೂಜೆ , ಹರಿಕಥೆ ಮಾಡಲಾಗುವುದು. ಸೇವಾ ಕಾರ್ಯಕ್ರಮಕ್ಕೆ ಗಟ್ಟಿ ಮಾಡಲು ವೈದ್ಯಕೀಯ ಶಿಬಿರ, ಸಮಾಜ ಮುಖಿ ಕಾರ್ಯಕ್ರಮ ಬಲ ಪಡಿಸಲು ಕೃಷಿ ಕಾರ್ಯಕ್ಕೆ ಸಲಹೆ ಮಾಹಿತಿ ಶಿಬಿರ ಅಗತ್ಯ ತುರ್ತು ಸೇವೆ ನೀಡುವ ಬಗ್ಗೆ ಇನ್ನಿತರ ಸೇವಾ ಕಾರ್ಯಕ್ರಮ ಮಾಡುವ ನಿಟ್ಟಿನಲ್ಲಿ ಗ್ರಾಮ ದಲ್ಲಿ ೩೦ ಜನರ ಸದೃಡ ತಂಡ ಕಟ್ಟಲಾಗುವುದು, ವಾರದ ಸಭೆ , ತಿಂಗಳ ಸಭೆ ಮುಂತಾದ ಪರಿಕಲ್ಪನೆ ಮಾಡಲಾಗುವುದು ಎಂದು ತಿಳಿಸಿದರು. ಸಂಚಾಲಕ ನರಸಿಂಹ ಮಡಿವಾಳ , ಪದ್ಮಿನಿ ವಸಂತ್, ಪ್ರಕಾಶ್ ಆಚಾರ್, ಸಂತೋಷ್ ದೇವಾಡಿಗ, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಸೀತಾರಾಮ ಶೆಟ್ಟಿ ಪ್ರಸ್ತಾವನೆಗೈದು,ಕಾರ್ಯಕ್ರಮ ನಿರೂಪಿಸಿದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…