ಮುಲ್ಕಿ: ಶಿಕ್ಷಣ ಕೇವಲ ಶಾಲಾ-ಕಾಲೇಜಿನ ಒಳಗೆ ಸೀಮಿತವಾಗಬಾರದು ಎಂದು ಕೆಮ್ರಾಲ್ ಸರಕಾರಿ ಪ್ರೌಢಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವರಾಜ್ ಹೇಳಿದರು. ಅವರು ಮುಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಸಮಾಜಕ್ಕೆ ಆಸ್ತಿಯಾಗಿ ಬದುಕಬೇಕು ಎಂದರು.

ವೇದಿಕೆಯ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು,ಪಂಜದಗುತ್ತು ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎನ್ ಡಿ ಅಜ್ಜಯ್ಯ, ಉದ್ಯಮಿ ಧನಂಜಯ ಶೆಟ್ಟಿಗಾರ್ ಸಾಗರಿಕ, ಸಾಮಾಜಿಕ ಕಾರ್ಯಕರ್ತ ನಿತಿನ್ ವಾಸ್ , ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ರಮಾನಂದ್ ಮತ್ತಿತರರು ಉಪಸ್ಥಿತರಿದ್ದರು ಪ್ರಥಮ ವಾಣಿಜ್ಯ ವಿಭಾಗದಶಿಬಿರಾರ್ಥಿನಿಖಿಲ್ ಕಾರ್ಯಕ್ರಮವನ್ನು ನಿರೂಪಿಸಿದರು. ಬಳಿಕ ಶಿಬಿರ ನಡೆಯಿತು






