ಕಲ್ಲಡ್ಕ ; ಕಾಂಕ್ರೀಟ್ ರಸ್ತೆಯ ಸುತ್ತಮುತ್ತ ಗಿಡಗಳು ಗಂಟೆಗಳು ಬೆಳೆದು ನಿಂತು ಶಾಲಾ ಮಕ್ಕಳು ನಡೆದು ಕೊಂಡು ಹೋಗಲು ಭಯಪಡುತ್ತಿದ್ದ ನೋಡಲು ಕಾಲು ದಾರಿಯಾಗಿ ಕಾಣುತ್ತಿದ್ದ ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ಪೂಪಾಡಿ ಕಲ್ಲು – ನಾರಂಕೋಡಿ ರಸ್ಥೆಯ ಬಗ್ಗೆ ಸ್ಥಳಿಯರು ಅನೇಕ ಬಾರಿ ಪಂಚಾಯತ್ಗೆ ಮನವಿ ನೀಡಿದರೂ ಸ್ಪಂದಿಸದೆ ಯಾವುದೇ ಕ್ರಮಗೊಳ್ಳದೆ ಇದ್ದು ಕಡೆಗೆ ಸ್ಥಳಿಯರಾದ ಮಹಮ್ಮದ್ ಹಮೀದು ಹಾಗು ಚರಣ್ ಇವರು ಯೋಜನೆಯ ಕಲ್ಲಡ್ಕ ಶೌಯ೯ ವಿಪತ್ತು ತಂಡದವರಿಗೆ ಮನವಿ ನೀಡಿದ್ದು ತಕ್ಷಣ ಕಾಯ೯ಪ್ರವತ೯ರಾದ ಶೌಯ೯ ತಂಡದವರು ರಸ್ತೆಯ ಎರಡು ಬದಿಯಲ್ಲಿ ಬೆಳೆದ ಗಿಡಗಳನ್ನು ಕಡಿದು ಸ್ವಚ್ಚತೆ ಮಾಡಿದರು.
ಈ ರಸ್ತೆಯ ಒಂದು ಭಾಗವು ಬೋಳಂತೂರು ಗ್ರಾಮಕ್ಕೆ ಸೇರಿದ್ದು ಇನ್ನೊಂದು ಬದಿಯು ಗೋಳ್ತಮಜಲು ಗ್ರಾಮ ಪಂಚಾಯತಿಗೆ ಸೇರಿದ್ದು ಎರಡು ಪಂಚಾಯತಿನವರು ತಮಗೆ ಸಂಬಂಧ ಪಡೆದ ರೀತಿಯಲ್ಲಿ ರಸ್ತೆ ರಿಪೇರಿಗೆ ಮೀನ ವೇಶ ಎನಿಸುತ್ತಿದ್ದರು. ಶೌರ್ಯ ತಂಡದ ಕಾರ್ಯಕ್ಕೆ ಸ್ಥಳಿಯರು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸ್ವಚ್ಛತಾ ಕಾರ್ಯದಲ್ಲಿ ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ ತುಳಸಿ ಕೊಳಕೀರು,ಶೌರ್ಯ ವೀಪತು ತಂಡದ ಅಧ್ಯಕ್ಷ ಮಾಧವ ಸಾಲಿಯಾನ್ ಕುದುರೆಬೆಟ್ಟು, ತಂಡದ ಸಂಯೋಜಕ ವಿದ್ಯಾ, ಕಲ್ಲಡ್ಕ ಒಕ್ಕೂಟ ಸೇವಾ ಪ್ರತಿನಿಧಿ ಗಣೇಶ್, ಶೌರ್ಯ ತಂಡ ಸದಸ್ಯರುಗಳಾದ , ವೆಂಕಪ್ಪ ಜಿ, ಮೌರೀಶ್, ರವಿಚಂದ್ರ ಜೋಗಿ,ರಮೇಶ್ ಕುದ್ರೆಬೆಟ್ಟು, ಸಂತೋಷ್ ಬೊಳ್ಪೋಡಿ,ಚಿನ್ನಾ ಕಲ್ಲಡ್ಕ,ಸತೀಶ್ ಮೇಸ್ತ್ರಿ,ಧನಂಜಯ ಕೊಳಕೀರು, ಸ್ಥಳೀಯರಾದ ಹಮೀದ್, ಚರಣ್ ಮೊದಲಾದವರು ಪಾಲ್ಗೊಂಡಿದ್ದರು
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…