ರಾಜ್ಯದ ಮಹತ್ವದ ಗೃಹಲಕ್ಷ್ಮಿ ಯೋಜನೆ ಪ್ರತಿ ಮನೆಯ ಗೃಹಿಣಿಗಳಿಗೆ ತಲುಪುತ್ತಿದೆ. ಅದರಂತೆಯೇ ಇದೀಗ ನಾಡದೇವತೆ ತಾಯಿ ಚಾಮುಂಡೇಶ್ವರಿಗೂ ಈ ಭಾಗ್ಯವನ್ನು ಸರ್ಕಾರ ಒದಗಿಸಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಪ್ರತಿ ತಿಂಗಳು 2 ಸಾವಿರ ರೂಪಾಯಿಯನ್ನು ನೀಡಬೇಕು ಎಂದು ವ್ಯಕ್ತಿಯೊಬ್ಬರು ಸರ್ಕಾರಕ್ಕೆ ಪತ್ರ ಬರೆದಿದ್ದರು.
ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಎಂಬವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ಗೆ ಪತ್ರ ಬರೆದಿದ್ದರು. ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆ ಮಾಡಬೇಕಾಗಿ ಕೇಳಿಕೊಂಡಿದ್ದರು. ಹಾಗಾಗಿ ಈ ಬಗ್ಗೆ ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಡಿ ಕೆ ಶಿವಕುಮಾರ್ ಸೂಚಿಸಿದ್ದಾರೆ.
ಇದೀಗ ಪ್ರತಿ ತಿಂಗಳು ಗೃಹಲಕ್ಷ್ಮೀ ಯೋಜನೆಯ ಹಣ ನಾಡದೇವತೆಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ. 59 ತಿಂಗಳ ಹಣವನ್ನು ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ ಅರ್ಪಣೆ ಮಾಡಲಿದ್ದಾರೆ. 1,18,000 ರೂಪಾಯಿ ಹಣವನ್ನ ದೇಗುಲಕ್ಕೆ ನೀಡಲು ಲಕ್ಷ್ಮೀ ಹೆಬ್ಬಾಳ್ಕರ್ ಮುಂದಾಗಿದ್ದಾರೆ.
ಸರ್ಕಾರವು ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಹಣ ಸಂದಾಯವಾಗಲಿದ್ದು, ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಹಣ ಸಂದಾಯವಾಗಲಿದೆ.
ತಮ್ಮ ವೈಯಕ್ತಿಕ ಹಣವನ್ನು ತಾಯಿ ಚಾಮುಂಡೇಶ್ವರಿಗೆ ಅರ್ಪಿಸಲು ಲಕ್ಷ್ಮೀ ಹೆಬ್ಬಾಳ್ಕರ್ ಮುಂದಾಗಿದ್ದಾರೆ
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…