ರಾಜ್ಯದಲ್ಲಿ ಪ್ರತಿನಿತ್ಯ ಸರಬರಾಜು ಆಗುತ್ತಿರುವ ಬಹುತೇಕ ಹಾಲು ಕಲಬೆರಕೆ ಎಂಬ ಆಘಾತಕಾರಿ ಮಾಹಿತಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ತಪಾಸಣೆಯಲ್ಲಿ ಬಹಿರಂಗವಾಗಿದೆ.
ಕೆಎಂಎಫ್ (ಕರ್ನಾಟಕ ಹಾಲು ಮಹಾಮಂಡಳಿ) ಪ್ರಯೋಗಾಲಯದಲ್ಲಿ ನಡೆದ ಪರೀಕ್ಷೆಯಲ್ಲಿ ಹಾಲು ಕಲಬೆರಕೆ ಇರೋದು ದೃಢಪಟ್ಟಿತ್ತು. ಹೀಗಾಗಿ ಇಡೀ ರಾಜ್ಯದಾದ್ಯಂತ ಖಾಸಗಿ ಕಂಪನಿಗಳ ಹಾಲನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಎಪ್ರಿಲ್, ಮೇ, ಜೂನ್, ಜುಲೈ, ಆಗಸ್ಟ್, ಸೆಪ್ಟೆಂಬರ್ನಲ್ಲಿ ಹಾಲು ಪರೀಕ್ಷೆ ಮಾಡಲಾಗಿ, ಈ ವೇಳೆ ವಿಷಕಾರಿ ಅಂಶ ಪತ್ತೆಯಾಗಿದೆ.
ರಾಜ್ಯದಲ್ಲಿ ನಡೆದ 44 ಹಾಲಿ ಬ್ರ್ಯಾಂಡ್ಗಳ 259 ಹಾಲಿನ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಹಾಲಿನ ಗುಣಮಟ್ಟದ ಪರೀಕ್ಷೆಯಿಂದ ಬೆಚ್ಚಿಬೀಳುವ ವಿಚಾರ ಬಹಿರಂಗ ಆಗಿದೆ. ಸೇವಿಸಲು ಯೋಗ್ಯವಲ್ಲದ ವಿಷಯುಕ್ತ ಹಾಲನ್ನು ಮಾರಾಟ ಮಾಡಲಾಗುತ್ತಿದೆ. ಎಫ್ಎಸ್ಎಸ್ಎಐ (ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ)ನ ಮಾನದಂಡಕ್ಕಿಂತ ಕಡಿಮೆ ಮಾನದಂಡದ ಹಾಲನ್ನು ಮಾರಾಟ ಮಾಡಲಾಗುತ್ತಿದೆ. ರಾಜ್ಯದಲ್ಲಿ ಸರಬರಾಜು ಆಗುತ್ತಿರುವ ಹಾಲಿನಲ್ಲಿ ಶೇಕಡಾ 4.63 ರಷ್ಟು ಕಲಬೆರಕೆ ಇದ್ದರೆ, ಶೇಕಡಾ 42.47 ರಷ್ಟು ಹಾಲು ಎಫ್ಎಸ್ಎಸ್ಎಐ ಮಾನದಂಡಕ್ಕಿಂತ ಕಡಿಮೆ ಇದೆ ಎಂದು ವರದಿ ಹೇಳಿದೆ.
ಆದಿತ್ಯ, ಆರೋಗ್ಯ, ದೊಡ್ಲ, ಶ್ರೀಕೃಷ್ಣ ತಿರುಮಲ, ಕೃಷ್ಣಾ ಡೇರಿ ಸೇರಿದಂತೆ ಅನೇಕ ಮಾದರಿಯ ಹಾಲನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಪರೀಕ್ಷೆ ವೇಳೆ ಹಾಲಿನಲ್ಲಿ ಆರೋಗ್ಯ ಹಾಳು ಮಾಡುವ ವಿಷಕಾರಿ ಅಂಶ ಪತ್ತೆಯಾಗಿದೆ. ಮಾಲ್ಟೊಡೆಕ್ಸ್ಟ್ರಿನ್ (maltodextrin), ಅಫ್ಲಾಟಾಕ್ಸಿನ್ (Aflatoxin) ಅಂಶಗಳು ಇರೋದು ಪತ್ತೆಯಾಗಿವೆ. ಹಾಲಿನ ಜೀವಿತಾವಧಿ ಹೆಚ್ಚಿಸಲು ಸೋಡಿಯಂ, ಸಕ್ಕರೆ, ಉಪ್ಪು ಬಳಕೆ ಮಾಡಲಾಗುತ್ತಿದೆ ಅನ್ನೋ ವಿಚಾರ ಬಯಲಾಗಿದೆ.
ಮಾಲ್ಟೊಡೆಕ್ಸ್ಟ್ರಿನ್: ಇದನ್ನು ಆಹಾರದಲ್ಲಿ ಬಳಸುತ್ತಾರೆ, ಆದರೆ ಹಾಲಿನಲ್ಲಿ ಯಾವುದೇ ಕಾರಣಕ್ಕೂ ಬಳಸುವಂತಿಲ್ಲ. ಹಾಲಿನ ಜೀವಿತಾವಧಿ ಹೆಚ್ಚಿಸಲು ಮಾಲ್ಟೊಡೆಕ್ಸ್ಟ್ರಿನ್ ಬಳಕೆ ಮಾಡಲಾಗುತ್ತದೆ. ಇದರ ಬಳಕೆಯಿಂದ ಅಲರ್ಜಿ, ಹೊಟ್ಟೆಯ ಸಮಸ್ಯೆಗಳು, ವಾಂತಿ, ಗ್ಯಾಸ್ಸ್ಟ್ರಿಕ್ ಆಗಲಿದೆ. ಮೇದೋಜೀರಕ ಗ್ರಂಥಿಯ ಮೇಲೆ ವ್ಯತಿರಿಕ್ತ ಪರಿಣಾಮ, ಮಧುಮೇಹ ಹೆಚ್ಚಾಗುವ ಸಾಧ್ಯತೆ ಇದೆ.
ಅಫ್ಲಾಟಾಕ್ಸಿನ್: ಪ್ರಾಣಿಗಳಿಗೆ ನೀಡುವ ಅಹಾರದಿಂದ ಹಾಲಿನಲ್ಲಿ ಬರಬಹುದು. ಅಫ್ಲಾಟಾಕ್ಸಿನ್ ಮನುಷ್ಯನ ದೇಹ ಸೇರಿದರೆ ವಾಕರಿಕೆ, ವಾಂತಿ, ಹೊಟ್ಟೆನೋವು, ಸ್ನಾಯು ಸೆಳೆತ, ಯಕೃತ್ತಿನಲ್ಲಿ ಹುಣ್ಣು, ಬೆಳವಣಿಗೆ ಕುಂಠಿತ, ಸಿರೋಸಿಸ್ ಅಲ್ಲದೇ ಕ್ಯಾನ್ಸರ್ ಸೇರಿದಂತೆ ವಿವಿಧ ರೋಗಗಳಿಗೆ ಅಹ್ವಾನ ನೀಡಬಲ್ಲದು. ಇನ್ನು ಉಪ್ಪು ಸಕ್ಕರೆ ಸೋಡಿಯಂ ಸೋಡಾದಿಂದ ಆಗುವ ಪರಿಣಾಮ ಎಲ್ಲರಿಗೂ ಗೊತ್ತಿರುವ ವಿಚಾರ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…