ಆರು ತಿಂಗಳಿಂದ ನೆನೆಗುದಿಗೆ ಬಿದ್ದಿರುವ ನಿಗಮ-ಮಂಡಳಿ ಪಟ್ಟಿ ಇವತ್ತು ಫೈನಲ್ ಆಗುವ ಸಾಧ್ಯತೆ ಇದೆ. ಈ ಸಂಬಂಧ ಇಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿಗೆ ಆಗಮಿಸ್ತಿದ್ದಾರೆ.
ನಿಗಮ, ಮಂಡಳಿ ಪಟ್ಟಿ ಅಂತಿಮಗೊಳಿಸುವ ಸಂಬಂಧ ಮಧ್ಯಾಹ್ನ 2 ಗಂಟೆಗೆ ಸಿಎಂ, ಡಿಸಿಎಂ ಜೊತೆ ಸಭೆ ನಡೆಯಲಿದೆ. ಶಾಸಕರ ಜೊತೆ 10 ರಿಂದ 15 ಕಾರ್ಯಕರ್ತರಿಗೆ ನಿಗಮ ಮಂಡಳಿ ಸ್ಥಾನ ನೀಡುವ ಕುರಿತು ಇಂದು ತೀರ್ಮಾನವಾಗಲಿದೆ. ಈ ಹಿಂದೆ ಶಾಸಕರ ಜೊತೆಗೆ ಕಾರ್ಯಕರ್ತರಿಗೂ ಅವಕಾಶ ನೀಡುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಒತ್ತಾಯಿಸಿದ್ದರು.
ಮೊದಲ ಹಂತವಾಗಿ ಅಧಿವೇಶನಕ್ಕೂ ಮೊದಲೇ 20 ಶಾಸಕರು, 4 ಪರಿಷತ್ ಸದಸ್ಯರಿಗೆ ಹಂಚಿಕೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಅಧಿವೇಶನ ಆರಂಭಕ್ಕೂ ಮೊದಲೇ ಶಾಸಕರಿಗೆ ನಿಗಮ, ಮಂಡಳಿ ಹಂಚಿಕೆಗೆ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಇಂದು ನಡೆಯುವ ಅಂತಿಮ ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…