ಆರು ತಿಂಗಳಿಂದ ನೆನೆಗುದಿಗೆ ಬಿದ್ದಿರುವ ನಿಗಮ-ಮಂಡಳಿ ಪಟ್ಟಿ ಇವತ್ತು ಫೈನಲ್ ಆಗುವ ಸಾಧ್ಯತೆ ಇದೆ. ಈ ಸಂಬಂಧ ಇಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿಗೆ ಆಗಮಿಸ್ತಿದ್ದಾರೆ.
ನಿಗಮ, ಮಂಡಳಿ ಪಟ್ಟಿ ಅಂತಿಮಗೊಳಿಸುವ ಸಂಬಂಧ ಮಧ್ಯಾಹ್ನ 2 ಗಂಟೆಗೆ ಸಿಎಂ, ಡಿಸಿಎಂ ಜೊತೆ ಸಭೆ ನಡೆಯಲಿದೆ. ಶಾಸಕರ ಜೊತೆ 10 ರಿಂದ 15 ಕಾರ್ಯಕರ್ತರಿಗೆ ನಿಗಮ ಮಂಡಳಿ ಸ್ಥಾನ ನೀಡುವ ಕುರಿತು ಇಂದು ತೀರ್ಮಾನವಾಗಲಿದೆ. ಈ ಹಿಂದೆ ಶಾಸಕರ ಜೊತೆಗೆ ಕಾರ್ಯಕರ್ತರಿಗೂ ಅವಕಾಶ ನೀಡುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಒತ್ತಾಯಿಸಿದ್ದರು.
ಮೊದಲ ಹಂತವಾಗಿ ಅಧಿವೇಶನಕ್ಕೂ ಮೊದಲೇ 20 ಶಾಸಕರು, 4 ಪರಿಷತ್ ಸದಸ್ಯರಿಗೆ ಹಂಚಿಕೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಅಧಿವೇಶನ ಆರಂಭಕ್ಕೂ ಮೊದಲೇ ಶಾಸಕರಿಗೆ ನಿಗಮ, ಮಂಡಳಿ ಹಂಚಿಕೆಗೆ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಇಂದು ನಡೆಯುವ ಅಂತಿಮ ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…