ಜನ ಮನದ ನಾಡಿ ಮಿಡಿತ

Advertisement

ಮುಲ್ಕಿಯಲ್ಲಿ ಸಾಧಕರಿಗೆ ಸಮ್ಮಾನ, ನಾಟಕ ಪ್ರದರ್ಶನ…

ಮುಲ್ಕಿ. ಡಿ.28: ಮುಲ್ಕಿ ರಂಗ ಕಲಾವಿದರು,ಯಕ್ಷಗಾನ ಕಲಾವಿದರಿಗೆ ನಿರಂತರ ಆಸರೆಯಾಗುವ ಪ್ರದೇಶವಾಗಿದ್ದು ಇಲ್ಲಿ ಕಲಾವಿದರು ಹಾಗೂ ಸಾಧಕರಿಗೆ ಅರ್ಹವಾಗಿಯೇ ಗೌರವ ಸಂದಾಯವಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಡಾ.ಹರಿಕೃಷ್ಣ ಪುನರೂರು ಹೇಳಿದರು.

ಅವರು ಮಂಗಳವಾರ ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದ ಆವರಣದಲ್ಲಿ ಕಿನ್ನಿಗೋಳಿ ವಿಜಯಾ ಕಲಾವಿದರ ಅಭಿಮಾನಿ ಬಳಗದ ವತಿಯಿಂದ ನಡೆದ ತುಳು ನಾಟಕ ಪ್ರದರ್ಶನದ ಸಂದರ್ಭ ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಚಂದ್ರಶೇಖರ ಸುವರ್ಣ ಹಾಗೂ ಸಮಾಜ ಸೇವಕ ಬಡಗಹಿತ್ಲು ಕಮಲಾಕ್ಷರ ಸಮ್ಮಾನದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಿನ್ನಿಗೋಳಿ ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ,ಯುವ ನಾಯಕ ಸುನಿಲ್ ಆಳ್ವ,ನಾಗೇಶ್ ಬಪ್ಪನಾಡು,ನಾಟಕ ನಿರ್ದೇಶಕ ಜಗದೀಶ್ ಶೆಟ್ಟಿ ಕೆಂಚನಕೆರೆ, ವಿಜಯಾ ಕಲಾವಿದರ ಸಂಚಾಲಕ ಸಾಯಿನಾಥ್ ಶೆಟ್ಟಿ,ವಿಜಯಾ ಕಲಾವಿದರ ಅಭಿಮಾನಿ ಬಳಗದ ರತ್ನಾಕರ ಶೆಟ್ಟಿ ಮತ್ತಿತರರಿದ್ದರು. ವಿಜಯಾ ಕಲಾವಿದರ ಅಧ್ಯಕ್ಷ ಶರತ್ ಶೆಟ್ಟಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರಕಾಶ್ ವಂದಿಸಿದರು. ಬಳಿಕ ವಿಜಯ ಕಲಾವಿದರಿಂದ ಹರೀಶ್ ಪಡುಬಿದ್ರೆಯವರ ಜಗದೀಶ್ ಶೆಟ್ಟಿ ಕೆಂಚನಕೆರೆಯವರ ನಿರ್ದೇಶನದ ಪಿರಾವುಡು ಒರಿ ಉಲ್ಲೆ ತುಳು ನಾಟಕ ಪ್ರದರ್ಶನ ಗೊಂಡಿತು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!