ಜನ ಮನದ ನಾಡಿ ಮಿಡಿತ

Advertisement

ಮುಲ್ಕಿಯಲ್ಲಿ ಸಾಧಕರಿಗೆ ಸಮ್ಮಾನ, ನಾಟಕ ಪ್ರದರ್ಶನ…

ಮುಲ್ಕಿ. ಡಿ.28: ಮುಲ್ಕಿ ರಂಗ ಕಲಾವಿದರು,ಯಕ್ಷಗಾನ ಕಲಾವಿದರಿಗೆ ನಿರಂತರ ಆಸರೆಯಾಗುವ ಪ್ರದೇಶವಾಗಿದ್ದು ಇಲ್ಲಿ ಕಲಾವಿದರು ಹಾಗೂ ಸಾಧಕರಿಗೆ ಅರ್ಹವಾಗಿಯೇ ಗೌರವ ಸಂದಾಯವಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಡಾ.ಹರಿಕೃಷ್ಣ ಪುನರೂರು ಹೇಳಿದರು.

ಅವರು ಮಂಗಳವಾರ ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದ ಆವರಣದಲ್ಲಿ ಕಿನ್ನಿಗೋಳಿ ವಿಜಯಾ ಕಲಾವಿದರ ಅಭಿಮಾನಿ ಬಳಗದ ವತಿಯಿಂದ ನಡೆದ ತುಳು ನಾಟಕ ಪ್ರದರ್ಶನದ ಸಂದರ್ಭ ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಚಂದ್ರಶೇಖರ ಸುವರ್ಣ ಹಾಗೂ ಸಮಾಜ ಸೇವಕ ಬಡಗಹಿತ್ಲು ಕಮಲಾಕ್ಷರ ಸಮ್ಮಾನದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಿನ್ನಿಗೋಳಿ ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ,ಯುವ ನಾಯಕ ಸುನಿಲ್ ಆಳ್ವ,ನಾಗೇಶ್ ಬಪ್ಪನಾಡು,ನಾಟಕ ನಿರ್ದೇಶಕ ಜಗದೀಶ್ ಶೆಟ್ಟಿ ಕೆಂಚನಕೆರೆ, ವಿಜಯಾ ಕಲಾವಿದರ ಸಂಚಾಲಕ ಸಾಯಿನಾಥ್ ಶೆಟ್ಟಿ,ವಿಜಯಾ ಕಲಾವಿದರ ಅಭಿಮಾನಿ ಬಳಗದ ರತ್ನಾಕರ ಶೆಟ್ಟಿ ಮತ್ತಿತರರಿದ್ದರು. ವಿಜಯಾ ಕಲಾವಿದರ ಅಧ್ಯಕ್ಷ ಶರತ್ ಶೆಟ್ಟಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರಕಾಶ್ ವಂದಿಸಿದರು. ಬಳಿಕ ವಿಜಯ ಕಲಾವಿದರಿಂದ ಹರೀಶ್ ಪಡುಬಿದ್ರೆಯವರ ಜಗದೀಶ್ ಶೆಟ್ಟಿ ಕೆಂಚನಕೆರೆಯವರ ನಿರ್ದೇಶನದ ಪಿರಾವುಡು ಒರಿ ಉಲ್ಲೆ ತುಳು ನಾಟಕ ಪ್ರದರ್ಶನ ಗೊಂಡಿತು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!