ಮುಲ್ಕಿ. ಡಿ.28: ಮುಲ್ಕಿ ರಂಗ ಕಲಾವಿದರು,ಯಕ್ಷಗಾನ ಕಲಾವಿದರಿಗೆ ನಿರಂತರ ಆಸರೆಯಾಗುವ ಪ್ರದೇಶವಾಗಿದ್ದು ಇಲ್ಲಿ ಕಲಾವಿದರು ಹಾಗೂ ಸಾಧಕರಿಗೆ ಅರ್ಹವಾಗಿಯೇ ಗೌರವ ಸಂದಾಯವಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಡಾ.ಹರಿಕೃಷ್ಣ ಪುನರೂರು ಹೇಳಿದರು.
ಅವರು ಮಂಗಳವಾರ ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದ ಆವರಣದಲ್ಲಿ ಕಿನ್ನಿಗೋಳಿ ವಿಜಯಾ ಕಲಾವಿದರ ಅಭಿಮಾನಿ ಬಳಗದ ವತಿಯಿಂದ ನಡೆದ ತುಳು ನಾಟಕ ಪ್ರದರ್ಶನದ ಸಂದರ್ಭ ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಚಂದ್ರಶೇಖರ ಸುವರ್ಣ ಹಾಗೂ ಸಮಾಜ ಸೇವಕ ಬಡಗಹಿತ್ಲು ಕಮಲಾಕ್ಷರ ಸಮ್ಮಾನದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಿನ್ನಿಗೋಳಿ ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ,ಯುವ ನಾಯಕ ಸುನಿಲ್ ಆಳ್ವ,ನಾಗೇಶ್ ಬಪ್ಪನಾಡು,ನಾಟಕ ನಿರ್ದೇಶಕ ಜಗದೀಶ್ ಶೆಟ್ಟಿ ಕೆಂಚನಕೆರೆ, ವಿಜಯಾ ಕಲಾವಿದರ ಸಂಚಾಲಕ ಸಾಯಿನಾಥ್ ಶೆಟ್ಟಿ,ವಿಜಯಾ ಕಲಾವಿದರ ಅಭಿಮಾನಿ ಬಳಗದ ರತ್ನಾಕರ ಶೆಟ್ಟಿ ಮತ್ತಿತರರಿದ್ದರು. ವಿಜಯಾ ಕಲಾವಿದರ ಅಧ್ಯಕ್ಷ ಶರತ್ ಶೆಟ್ಟಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರಕಾಶ್ ವಂದಿಸಿದರು. ಬಳಿಕ ವಿಜಯ ಕಲಾವಿದರಿಂದ ಹರೀಶ್ ಪಡುಬಿದ್ರೆಯವರ ಜಗದೀಶ್ ಶೆಟ್ಟಿ ಕೆಂಚನಕೆರೆಯವರ ನಿರ್ದೇಶನದ ಪಿರಾವುಡು ಒರಿ ಉಲ್ಲೆ ತುಳು ನಾಟಕ ಪ್ರದರ್ಶನ ಗೊಂಡಿತು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…