ಮುಲ್ಕಿ. ಡಿ.28: ಮುಲ್ಕಿ ರಂಗ ಕಲಾವಿದರು,ಯಕ್ಷಗಾನ ಕಲಾವಿದರಿಗೆ ನಿರಂತರ ಆಸರೆಯಾಗುವ ಪ್ರದೇಶವಾಗಿದ್ದು ಇಲ್ಲಿ ಕಲಾವಿದರು ಹಾಗೂ ಸಾಧಕರಿಗೆ ಅರ್ಹವಾಗಿಯೇ ಗೌರವ ಸಂದಾಯವಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಡಾ.ಹರಿಕೃಷ್ಣ ಪುನರೂರು ಹೇಳಿದರು.
ಅವರು ಮಂಗಳವಾರ ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದ ಆವರಣದಲ್ಲಿ ಕಿನ್ನಿಗೋಳಿ ವಿಜಯಾ ಕಲಾವಿದರ ಅಭಿಮಾನಿ ಬಳಗದ ವತಿಯಿಂದ ನಡೆದ ತುಳು ನಾಟಕ ಪ್ರದರ್ಶನದ ಸಂದರ್ಭ ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಚಂದ್ರಶೇಖರ ಸುವರ್ಣ ಹಾಗೂ ಸಮಾಜ ಸೇವಕ ಬಡಗಹಿತ್ಲು ಕಮಲಾಕ್ಷರ ಸಮ್ಮಾನದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಿನ್ನಿಗೋಳಿ ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ,ಯುವ ನಾಯಕ ಸುನಿಲ್ ಆಳ್ವ,ನಾಗೇಶ್ ಬಪ್ಪನಾಡು,ನಾಟಕ ನಿರ್ದೇಶಕ ಜಗದೀಶ್ ಶೆಟ್ಟಿ ಕೆಂಚನಕೆರೆ, ವಿಜಯಾ ಕಲಾವಿದರ ಸಂಚಾಲಕ ಸಾಯಿನಾಥ್ ಶೆಟ್ಟಿ,ವಿಜಯಾ ಕಲಾವಿದರ ಅಭಿಮಾನಿ ಬಳಗದ ರತ್ನಾಕರ ಶೆಟ್ಟಿ ಮತ್ತಿತರರಿದ್ದರು. ವಿಜಯಾ ಕಲಾವಿದರ ಅಧ್ಯಕ್ಷ ಶರತ್ ಶೆಟ್ಟಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರಕಾಶ್ ವಂದಿಸಿದರು. ಬಳಿಕ ವಿಜಯ ಕಲಾವಿದರಿಂದ ಹರೀಶ್ ಪಡುಬಿದ್ರೆಯವರ ಜಗದೀಶ್ ಶೆಟ್ಟಿ ಕೆಂಚನಕೆರೆಯವರ ನಿರ್ದೇಶನದ ಪಿರಾವುಡು ಒರಿ ಉಲ್ಲೆ ತುಳು ನಾಟಕ ಪ್ರದರ್ಶನ ಗೊಂಡಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…