ಜನ ಮನದ ನಾಡಿ ಮಿಡಿತ

Advertisement

“ಪಕ್ಷವನ್ನು ಮಾಸ್ ಆಗಿಸಬೇಕೆಂಬ ನಿಟ್ಟಿನಲ್ಲಿ 18 ಬಾರಿ ರಾಜ್ಯ ಪ್ರವಾಸ”; ಸಂಸದ ನಳೀನ್

ಪುತ್ತೂರು:ರಾಷ್ಟ್ರೀಯ ವಿಚಾರಧಾರೆಯಲ್ಲಿ ಬೆಳೆದ ತಾನು, ಕೊಟ್ಟಿರುವ ಜವಾಬ್ದಾರಿಯಲ್ಲಿ ಮಹಾನ್ ಸಾಧನೆ ಮಾಡಿದ್ದೇನೆ ಎಂದು ಹೇಳುವುದಿಲ್ಲ, ಬದಲಾಗಿ ಆದರ್ಶವಾಗಿ, ಯಾವುದೇ ಚ್ಯುತಿ ಬಾರದಂತೆ, ಪ್ರಾಮಾಣಿಕ ರಾಜಕಾರಣ ಮಾಡಿದ್ದೇನೆ ಎಂದು ಬಿಜೆಪಿ ನಿಕಪಟೂರ್ವ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಪುತ್ತೂರಿನ ರೋಟರಿ ಸಭಾಭವನದಲ್ಲಿ ನಡೆದ ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರ ನಗರ ಮತ್ತು ಗ್ರಾಮಾಂತರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡ್ತಾ, ಜನರ ಆಶೀರ್ವಾದ ಮತ್ತು ಪ್ರೀತಿಯಿಂದ 3 ಬಾರಿ ಸಂಸದನಾಗಿ, ರಾಜ್ಯಾಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ರಾಜ್ಯಾಧ್ಯಕ್ಷ ಸ್ಥಾನ ನೀಡಿದಾಗ ನೀನು ಮಾಸ್ ಲೀಡರ್ ಆಗಲು ಈ ಅವಕಾಶವಲ್ಲ, ಪಕ್ಷವನ್ನು ಮಾಸ್ ಆಗಿಸಬೇಕು ಎಂದು ಪಕ್ಷ ತಿಳಿಸಿತ್ತು. ಅದರಂತೆ 18 ಬಾರಿ ರಾಜ್ಯ ಪ್ರವಾಸ ಮಾಡಿದ್ದೇನೆ. ಪಂಚಾಯತ್ ಚುನಾವಣೆಯಿಂದ ಎಲ್ಲಾ ಚುನಾವಣೆಗಳಲ್ಲೂ ಅತಿಹೆಚ್ಚು ಗೆಲುವು ಬಿಜೆಪಿ ಪಕ್ಷದ್ದಾಗಿದೆ ಅಂತ ಹೇಳಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ, ಮಾಜಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!