ದ. ಕ. ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಬಂಟ್ವಾಳ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಗುಲಾಬಿ ಆಂದೋಲನ ಕಾರ್ಯಕ್ರಮ.
ಬಂಟ್ವಾಳ ತಾಲೂಕಿನ ದ.ಕ.ಜಿ.ಪ ಸರಕಾರಿ ಪ್ರಾಥಮಿಕ ಶಾಲೆ, ಕೊಡಂಗೆ ಇಲ್ಲಿ ಜರಗಿತು . ತಾಲೂಕು ಆರೋಗ್ಯಾಧಿಕಾರಿ ಡಾಕ್ಟರ್ ಅಶೋಕ್ ರೈ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ವಿವರವಾಗಿ ಮಕ್ಕಳಿಗೆ ಮಾಹಿತಿ ನೀಡಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕುಸುಮ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಶೃತಿ ತಂಬಾಕು ವ್ಯಸನಿಗಳು ಆಗುವುದಿಲ್ಲ ಮತ್ತು ನಮ್ಮ ಕುಟುಂಬ ವರ್ಗದವರನ್ನು ಹಾಗೂ ಸ್ನೇಹಿತರನ್ನು ಈ ದುಶ್ಚಟದಿಂದ ಹೊರ ತರಲು ಪ್ರಯತ್ನ ಮಾಡುತ್ತೇವೆ ಎಂಬ ಬಗ್ಗೆ ಮಕ್ಕಳಿಗೆ ಪ್ರತಿಜ್ಞೆ ಮಾಡಿಸಿದರು. ಈ ಸಂದರ್ಭದಲ್ಲಿ ತಂಬಾಕು ದುಷ್ಪಟದ ಅರಿವು ಮೂಡಿಸಲು ಜಾತ ನಡೆಸಲಾಯಿತು ಹಾಗೂ ಸುತ್ತಮುತ್ತಲಿನ ಅಂಗಡಿಗಳಿಗೆ ತೆರಲಿ ಗುಲಾಬಿ ಹೂ ನೀಡಿ ತಂಬಾಕು ವಸ್ತುಗಳನ್ನು ಮಾರಾಟ ಮಾಡದಂತೆ ಅಂಗಡಿ ಮಾಲಕರಿಗೆ ಮನವರಿಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರಾಧ, ಆರೋಗ್ಯ ನಿರೀಕ್ಷಣಾಧಿಕಾರಿ ರಾಕೇಶ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸೌಮ್ಯ, ಆಶಾ ಕಾರ್ಯಕರ್ತೆ ಸರಸ್ವತಿ ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಸಿಬ್ಬಂದಿ ಸುಜಾತ,ಶಾಲಾ ಮುಖ್ಯ ಶಿಕ್ಷಕಿ ಸುಗುಣ ಮತ್ತು ಎಲ್ಲಾ ಶಿಕ್ಷಕರು, ಶಾಲಾಭಿವೃದ್ಧಿ ಸದಸ್ಯರಾದ ಅಬ್ದುಲ್ ಜಲೀಲ್ ಭಾಗವಹಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…