ಜನ ಮನದ ನಾಡಿ ಮಿಡಿತ

Advertisement

ಡಿಸೆಂಬರ್ .03 ಆಳ್ವಾಸ್ ನಲ್ಲಿ ನಾಯಿಮರಿ ನಾಟಕ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ಮೂಡುಬಿದ್ರೆ ಆಶ್ರಯದಲ್ಲಿ
ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರು ಅಭಿನಯಿಸುವ ನಾಯಿಮರಿ ನಾಟಕ ಪ್ರದರ್ಶನವನ್ನು ಡಿ.03 ರಂದು ಸಂಜೆ 6.30 ಕ್ಕೆ ಮೂಡುಬಿದಿರೆಯ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ.


ಈಗಾಗಲೇ ರಾಜ್ಯಾದ್ಯಂತ 50 ಕ್ಕಿಂತಲೂ ಹೆಚ್ಚು ಪ್ರದರ್ಶನ ಕಂಡ ಆಳ್ವಾಸ್ ಅಭಿನಯದ ಈ ಪ್ರಸಿದ್ದ ಮಕ್ಕಳ ನಾಟಕವನ್ನು ಕನ್ನಡದ ಖ್ಯಾತ ಲೇಖಕಿ ಶ್ರೀಮತಿ ವೈದೇಹಿಯವರು ರಚಿಸಿದ್ದಾರೆ. ರಂಗಮಾಂತ್ರಿಕ ಡಾ.ಜೀವನ್ ರಾಂ ಸುಳ್ಯ ರವರು ನಿರ್ದೇಶಿಸಿದ್ದಾರೆ. ಮಾ| ಮನುಜ ನೇಹಿಗ, ಸುಮನಾ ಪ್ರಸಾದ್ , ಸತ್ಯಜಿತ್ ಹಾಗೂ ಗೀತಂ ಗಿರೀಶ್ ಸಂಗೀತ ನೀಡಿದ್ದಾರೆ.


ಸರಳವಾದ ಅಷ್ಟೇ ರಂಜನೀಯ ಅಂಶಗಳಿಂದ ಕೂಡಿದ ಈ ನಾಯಿಮರಿ ನಾಟಕವು ಸಮರ್ಥ ನಿರ್ದೇಶನ, ನವಿರು ಹಾಸ್ಯ, ಪರಿಣಾಮಕಾರಿ ಅಭಿನಯ, ಸುಶ್ರಾವ್ಯ ಸಂಗೀತ, ಉತ್ತಮ ರಂಗ ಸಜ್ಜಿಕೆ ಮತ್ತು ಬೆಳಕು ಸಂಯೋಜನೆಯೊಂದಿಗೆ ಪ್ರೇಕ್ಷಕರನ್ನು ಪ್ರತಿಕ್ಷಣವೂ ಹಿಡಿದಿಟ್ಟುಕೊಳ್ಳುವಂತಹ ಪ್ರಯೋಗವಾಗಿದೆ.
ಶೈಕ್ಷಣಿಕವಾಗಿಯೂ ಅತ್ಯುತ್ತಮ ಸಂದೇಶ ಸಾರುವ ಈ ನಾಟಕವು ಪ್ರತಿಯೊಬ್ಬ ಮಕ್ಕಳೂ ನೋಡಬೇಕಾದ ಪ್ರಯೋಗವಾಗಿದೆ.ಯಾವುದೇ ಸಭಾ ಕಾರ್ಯಕ್ರಮವಿಲ್ಲದೆ ನೇರವಾಗಿ 6.30 ಕ್ಕೆ ನಾಟಕ ಆರಂಭವಾಗುತ್ತದೆ ಹಾಗೂ ಸಾರ್ವಜನಿಕರಿಗೆ ಪ್ರವೇಶ ಉಚಿತವಾಗಿರುತ್ತದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!