ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ಮೂಡುಬಿದ್ರೆ ಆಶ್ರಯದಲ್ಲಿ
ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರು ಅಭಿನಯಿಸುವ ನಾಯಿಮರಿ ನಾಟಕ ಪ್ರದರ್ಶನವನ್ನು ಡಿ.03 ರಂದು ಸಂಜೆ 6.30 ಕ್ಕೆ ಮೂಡುಬಿದಿರೆಯ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ.
ಈಗಾಗಲೇ ರಾಜ್ಯಾದ್ಯಂತ 50 ಕ್ಕಿಂತಲೂ ಹೆಚ್ಚು ಪ್ರದರ್ಶನ ಕಂಡ ಆಳ್ವಾಸ್ ಅಭಿನಯದ ಈ ಪ್ರಸಿದ್ದ ಮಕ್ಕಳ ನಾಟಕವನ್ನು ಕನ್ನಡದ ಖ್ಯಾತ ಲೇಖಕಿ ಶ್ರೀಮತಿ ವೈದೇಹಿಯವರು ರಚಿಸಿದ್ದಾರೆ. ರಂಗಮಾಂತ್ರಿಕ ಡಾ.ಜೀವನ್ ರಾಂ ಸುಳ್ಯ ರವರು ನಿರ್ದೇಶಿಸಿದ್ದಾರೆ. ಮಾ| ಮನುಜ ನೇಹಿಗ, ಸುಮನಾ ಪ್ರಸಾದ್ , ಸತ್ಯಜಿತ್ ಹಾಗೂ ಗೀತಂ ಗಿರೀಶ್ ಸಂಗೀತ ನೀಡಿದ್ದಾರೆ.
ಸರಳವಾದ ಅಷ್ಟೇ ರಂಜನೀಯ ಅಂಶಗಳಿಂದ ಕೂಡಿದ ಈ ನಾಯಿಮರಿ ನಾಟಕವು ಸಮರ್ಥ ನಿರ್ದೇಶನ, ನವಿರು ಹಾಸ್ಯ, ಪರಿಣಾಮಕಾರಿ ಅಭಿನಯ, ಸುಶ್ರಾವ್ಯ ಸಂಗೀತ, ಉತ್ತಮ ರಂಗ ಸಜ್ಜಿಕೆ ಮತ್ತು ಬೆಳಕು ಸಂಯೋಜನೆಯೊಂದಿಗೆ ಪ್ರೇಕ್ಷಕರನ್ನು ಪ್ರತಿಕ್ಷಣವೂ ಹಿಡಿದಿಟ್ಟುಕೊಳ್ಳುವಂತಹ ಪ್ರಯೋಗವಾಗಿದೆ.
ಶೈಕ್ಷಣಿಕವಾಗಿಯೂ ಅತ್ಯುತ್ತಮ ಸಂದೇಶ ಸಾರುವ ಈ ನಾಟಕವು ಪ್ರತಿಯೊಬ್ಬ ಮಕ್ಕಳೂ ನೋಡಬೇಕಾದ ಪ್ರಯೋಗವಾಗಿದೆ.ಯಾವುದೇ ಸಭಾ ಕಾರ್ಯಕ್ರಮವಿಲ್ಲದೆ ನೇರವಾಗಿ 6.30 ಕ್ಕೆ ನಾಟಕ ಆರಂಭವಾಗುತ್ತದೆ ಹಾಗೂ ಸಾರ್ವಜನಿಕರಿಗೆ ಪ್ರವೇಶ ಉಚಿತವಾಗಿರುತ್ತದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…