ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ಮೂಡುಬಿದ್ರೆ ಆಶ್ರಯದಲ್ಲಿ
ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರು ಅಭಿನಯಿಸುವ ನಾಯಿಮರಿ ನಾಟಕ ಪ್ರದರ್ಶನವನ್ನು ಡಿ.03 ರಂದು ಸಂಜೆ 6.30 ಕ್ಕೆ ಮೂಡುಬಿದಿರೆಯ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ.
ಈಗಾಗಲೇ ರಾಜ್ಯಾದ್ಯಂತ 50 ಕ್ಕಿಂತಲೂ ಹೆಚ್ಚು ಪ್ರದರ್ಶನ ಕಂಡ ಆಳ್ವಾಸ್ ಅಭಿನಯದ ಈ ಪ್ರಸಿದ್ದ ಮಕ್ಕಳ ನಾಟಕವನ್ನು ಕನ್ನಡದ ಖ್ಯಾತ ಲೇಖಕಿ ಶ್ರೀಮತಿ ವೈದೇಹಿಯವರು ರಚಿಸಿದ್ದಾರೆ. ರಂಗಮಾಂತ್ರಿಕ ಡಾ.ಜೀವನ್ ರಾಂ ಸುಳ್ಯ ರವರು ನಿರ್ದೇಶಿಸಿದ್ದಾರೆ. ಮಾ| ಮನುಜ ನೇಹಿಗ, ಸುಮನಾ ಪ್ರಸಾದ್ , ಸತ್ಯಜಿತ್ ಹಾಗೂ ಗೀತಂ ಗಿರೀಶ್ ಸಂಗೀತ ನೀಡಿದ್ದಾರೆ.
ಸರಳವಾದ ಅಷ್ಟೇ ರಂಜನೀಯ ಅಂಶಗಳಿಂದ ಕೂಡಿದ ಈ ನಾಯಿಮರಿ ನಾಟಕವು ಸಮರ್ಥ ನಿರ್ದೇಶನ, ನವಿರು ಹಾಸ್ಯ, ಪರಿಣಾಮಕಾರಿ ಅಭಿನಯ, ಸುಶ್ರಾವ್ಯ ಸಂಗೀತ, ಉತ್ತಮ ರಂಗ ಸಜ್ಜಿಕೆ ಮತ್ತು ಬೆಳಕು ಸಂಯೋಜನೆಯೊಂದಿಗೆ ಪ್ರೇಕ್ಷಕರನ್ನು ಪ್ರತಿಕ್ಷಣವೂ ಹಿಡಿದಿಟ್ಟುಕೊಳ್ಳುವಂತಹ ಪ್ರಯೋಗವಾಗಿದೆ.
ಶೈಕ್ಷಣಿಕವಾಗಿಯೂ ಅತ್ಯುತ್ತಮ ಸಂದೇಶ ಸಾರುವ ಈ ನಾಟಕವು ಪ್ರತಿಯೊಬ್ಬ ಮಕ್ಕಳೂ ನೋಡಬೇಕಾದ ಪ್ರಯೋಗವಾಗಿದೆ.ಯಾವುದೇ ಸಭಾ ಕಾರ್ಯಕ್ರಮವಿಲ್ಲದೆ ನೇರವಾಗಿ 6.30 ಕ್ಕೆ ನಾಟಕ ಆರಂಭವಾಗುತ್ತದೆ ಹಾಗೂ ಸಾರ್ವಜನಿಕರಿಗೆ ಪ್ರವೇಶ ಉಚಿತವಾಗಿರುತ್ತದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…