ಫ್ರೆಂಡ್ಸ್ ವಾಲ್ಪಾಡಿ ಆಶ್ರಯದಲ್ಲಿ ನಡೆದ ವಾಲ್ಪಾಡಿ ಟ್ರೋಫಿ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಸಾಮಾಜಿಕ ಸೇವೆಗಾಗಿ ಹಿಂದೂ,ಮುಸ್ಲಿಂ ಹಾಗೂ ಕ್ರೈಸ್ತ ಸಮುದಾಯದ ಮೂವರನ್ನು ಸೌಹಾರ್ದವಾಗಿ ಸನ್ಮಾನಿಸಲಾಯಿತು.
ಅಂಬುಲೆನ್ಸ್ ಸೇವೆಯ ಮೂಲಕ ಗಮನಸೆಳೆದಿರುವ ಪ್ರಶಾಂತ್ ಶೆಟ್ಟಿ ಮಾರ್ನಾಡ್, ಸಮಾಜ ಸೇವಕರಾದ ಹನೀಫ್ ರಹ್ಮಾನಿಯ ಹಾಗೂ ರಾಜೇಶ್ ಕಡಲಕೆರೆ ಸನ್ಮಾನಗೊಂಡವರು.
ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಹಾಗೂ ಪುರಸಭಾ ಮುಖ್ಯಾಧಿಕಾರಿ ಇಂದು ಎಮ್.ಅವರು ಮೂವರನ್ನು ಸನ್ಮಾನಿಸಿ ಅಭಿನಂದಿಸಿದರು.
ವಾಲ್ಪಾಡಿ ಪಂಚಾಯತ್ ಸದಸ್ಯ ಅರುಣ್ ಕುಮಾರ್ ಶೆಟ್ಟಿ, ಸಂತೋಷ್ ಶೆಟ್ಟಿ ಮಿಜಾರ್,ಭರತ್ ಶೆಟ್ಟಿ ಇರುವೈಲ್ ,ಬಾಲಕೃಷ್ಣ ಹೌದಾಲ್,ಮಹೇಶ್ ಕೋಟೆಬಾಗಿಲು ಹಾಗೂ ಎಸ್.ಎ.ಇಬ್ರಾಹಿಂ ಅವರು ಅತಿಥಿಗಳಾಗಿ ಭಾಗವಹಿಸಿದ್ದರು. ವಾಲ್ಪಾಡಿ ಟ್ರೋಫಿ ಪಂದ್ಯಾಕೂಟದಲ್ಲಿ ಎಫ್.ಸಿ.ಟಿ ಪುತ್ತಿಗೆ ಹಾಗೂ ಶ್ರೀದೇವಿ ಕೊಡ್ಯಡ್ಕ ತಂಡಗಳು ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದುಕೊಂಡಿತು.
ಎಫ್.ಸಿ.ಟಿ ತಂಡದ ಅಝೀಮ್ ಸರಣಿಶ್ರೇಷ್ಠ,ಹಾರಿಸ್ ಪಂದ್ಯಶ್ರೇಷ್ಠ ಹಾಗೂ ರಿಯಾಝ್ ಅವರು ಉತ್ತಮ ಎಸೆತಗಾರ ಪ್ರಶಸ್ತಿ ಪಡೆದುಕೊಂಡರೆ ಕೊಡ್ಯಡ್ಕ ತಂಡದ ಸಾಗರ್ ಉತ್ತಮ ದಾಂಡಿಗ,ಪ್ರವೀಣ್ ಉತ್ತಮ ಕ್ಷೇತ್ರ ರಕ್ಷಕ ಹಾಗೂ ಗುಂಡುಕಲ್ಲು ತಂಡದ ನಸೀಬ್ ಅವರು ಉತ್ತಮ ಗೂಟರಕ್ಷಕ ಪ್ರಶಸ್ತಿ ಪಡೆದುಕೊಂಡರು.
ಫ್ರೆಂಡ್ಸ್ ವಾಲ್ಪಾಡಿ ಯ ಅಧ್ಯಕ್ಷ ಅಶ್ರಫ್ ವಾಲ್ಪಾಡಿ ಸ್ವಾಗತಿಸಿ ರಫೀಝ್ ಮೂಡುಬಿದಿರೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಹಫೀಝ್ ತೋಡಾರ್,ಹನೀಫ್,ರಝಾಕ್,ಇರ್ಷಾದ್, ಸಾತ್ವಿಕ್,ರಶೀದ್,ಇಕ್ಬಾಲ್, ಹಬೀಬ್,ದಾವೂದ್ ,ಹಮಿದಾಕ,ಹಾರಿಸ್ ,ಸಯ್ಯದಾಲಿ,ಮತ್ತಿತರರು ಸಹಕರಿಸಿದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…