ಬoಟ್ವಾಳ:ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಹಾಗೂ ಮರಳನ್ನು ಪೋಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡ ಘಟನೆ ಸಜೀಪದಲ್ಲಿ ನಡೆದಿದೆ.

ಸಜೀಪದಿಂದ ಚೇಳೂರು ಕಡೆಗೆ ಲಾರಿ ಸಾಗುತ್ತಿರುವ ವೇಳೆ ಪೊಲೀಸರು ದಾಳಿ ನಡೆಸಿ, ಲಾರಿಯನ್ನು ಹಾಗೂ ಒಟ್ಟು 2 ಲಕ್ಷ 5 ಸಾವಿರ ಮೌಲ್ಯದ ಮರಳನ್ನು ವಶಪಡಿಸಿಕೊಂಡಿದ್ದಾರೆ. ಸಜೀಪ ಹೊಳೆಬದಿಯಲ್ಲಿ ಅಬ್ದುಲ್ ರಹಮಾನ್ ಎಂಬವರು ಮರಳುಗಾರಿಕೆ ನಡೆಸುತ್ತಿದ್ದು, ಅವರು ಲಾರಿಗೆ ಲೋಡ್ ಮಾಡಿ ಕಳುಹಿಸಿದ ಬಗ್ಗೆ ಲಾರಿ ಚಾಲಕ ಮಹಮ್ಮದ್ ಶಾಫಿ ಪೊಲೀಸರಿಗೆ ತಿಳಿಸಿದ್ದಾನೆ. ಇನ್ನೂ ಪರವಾನಿಗೆ ರಹಿತವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಸಹಿತ ಚಾಲಕನ ಮೇಲೆ ಪ್ರಕರಣ ದಾಖಲಾಗಿದೆ.



