ಪುತ್ತೂರು:ಪುತ್ತೂರಿನಲ್ಲಿ ಮಹಿಳೆಯೊರ್ವರಿಗೆ ಮದ್ಯ ನೀಡಿ, ಅತ್ಯಾಚಾರಗೈದಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಇದೀಗ ಪೊಲೀಸರು ಆರೋಪಿ ಸಂಶುದ್ದೀನ್ ಆಸ್ಗರ್ ಆಲಿ ಎಂಬಾತನನ್ನು ಬಂಧಿಸಿದ್ದಾರೆ.

ಹಾಸನ ತಾಲೂಕಿನ ಚೆನ್ನರಾಯಪಟ್ಟಣದ ಮಹಿಳೆಯೊಬ್ಬರು ಪುತ್ತೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿದ್ದ ವೇಳೆ ಆಕೆಗೆ ಆರೋಪಿಯು ಸೇವಿಸಲು ಮದ್ಯ ನೀಡಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದನು. ಆರೋಪಿಯು ಪುತ್ತೂರು ತಾಲೂಕಿನ ಆರ್ಯಾಪು ನಿವಾಸಿಯಾಗಿದ್ದು, ಪ್ರಸ್ತುತ ನಗರದ ಹೊರವಲಯದ ಬನ್ನೂರು ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದಾನೆ. ಇನ್ನೂ ಈತನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪುತ್ತೂರು ನಗರ ಪೊಲೀಸರು ಆರೋಪಿ ಸಂಶುದ್ದೀನ್ ಆಸ್ಗರ್ ಆಲಿಯನ್ನು ಪುತ್ತೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಪತ್ತೆ ಮಾಡಿ, ಬಳಿಕ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.



