ಪುತ್ತೂರು:ಶಾಸಕರಿಗೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬರುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದ್ದಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗರಂ ಆಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರನ್ನು ಉದ್ದೇಶಿಸಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕ ಅಶೋಕ್ ಕುಮಾರ್ ರೈ, ಸ್ಥಳೀಯ ಶಾಸಕ ನಾನೇ, ನಾನು ಅನುದಾನ ಬರುತ್ತಿಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಜಿಲ್ಲೆಯ ಬೇರೆ ಪಕ್ಷದ ಶಾಸಕರು ಹೇಳ್ತಾ ಇದ್ದಾರೆ. ಆದರೆ ನಮಗೆ ಅನುದಾನಗಳು ಬರುತ್ತಿದೆ. ಕಾಮಗಾರಿಗಳೂ ನಡೆಯುತ್ತಿದೆ ಎಂದು ಸಚಿವರ ಪರವಾಗಿ ಉತ್ತರ ನೀಡಿದ್ದಾರೆ. ಈ ವೇಳೆ ಜೊತೆಗಿದ್ದ ಸಚಿವ ಆರ್.ಬಿ.ತಿಮ್ಮಾಪುರ ಶಾಸಕರ ಮಾತಿಗೆ ಹೌದೆನ್ನುವಂತೆ ತಲೆಯಾಡಿಸಿದ್ದಾರೆ.



