ಕರಾವಳಿ

ಮುಲ್ಕಿ ಸೀಮೆಯ ಅರಸು ಕಂಬಳದಲ್ಲಿ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣರಾಜ ಒಡೆಯರ್ ಭಾಗವಹಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ

ಮುಲ್ಕಿ: ಡಿಸೆಂಬರ್ 24ರಂದು ಮುಲ್ಕಿ ಸೀಮೆಯ ಅರಸು ಕಂಬಳದಲ್ಲಿ ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣರಾಜ ಒಡೆಯರ್ ಭಾಗವಹಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಪಡುಪಣಂಬೂರು ಮುಲ್ಕಿ ಅರಮನೆಯಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ವಹಿಸಿ ಮಾತನಾಡಿ ಮೈಸೂರು ಒಡೆಯರು ಮುಲ್ಕಿ ಸೀಮೆಯ ಅರಸು ಕುಂಬಳಕ್ಕೆ ಆಗಮಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದ್ದು ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮನವಿ ಮಾಡಿದರು.
ಸಭೆಯಲ್ಲಿ ಮಂಗಳೂರು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯುವರಾಜ ಚೈನ್ ಮಾತನಾಡಿ ಡಿಸೆಂಬರ್ 24ರಂದು ಮೈಸೂರು ಒಡೆಯರು ಆಗಮಿಸುವ ಸಂದರ್ಭ ಶಿಸ್ತುಬದ್ಧವಾಗಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಡಲು ಮನವಿ ಮಾಡಿದರು.


ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ರಾಮ್ ಭಟ್ ಪಡುಪಣಂಬೂರು, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಂಬಳ ಸಮಿತಿ ಅಧ್ಯಕ್ಷ ಕಿರಣ್ ಶೆಟ್ಟಿ ಕೊಲ್ನಾಡುಗುತ್ತು, ಶ್ರೀಕಾಂತ್ ಭಟ್, ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ವಸಂತ್ ಬೆರ್ನಾಡ್, ಉಳೆಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಧರ್ಮದರ್ಶಿ ಮೋಹನ್ ದಾಸ್ ಸುರತ್ಕಲ್, ಕಲ್ಲಾಪು ಶ್ರೀ ವೀರಭದ್ರ ದೇವಸ್ಥಾನದ ಕಾಂತಣ್ಣ ಗುರಿಕಾರ, ಮುಲ್ಕಿ ಪೊಲೀಸ್ ಠಾಣೆಯ ಎಸ್ ಐ ಮಾರುತಿ,ಗೌತಮ್ ಜೈನ್ ಮುಲ್ಕಿ ಅರಮನೆ, ಮತ್ತಿತರರು ಉಪಸ್ಥಿತರಿದ್ದರು.
ಪೂರ್ವಭಾವಿ ಸಿದ್ಧತೆ ಬಗ್ಗೆ ಹಳೆಯಂಗಡಿ ಗ್ರಾ.ಪಂ.ಅಧ್ಯಕ್ಷೆ ಪೂರ್ಣಿಮಾ, ಮುಲ್ಕಿ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಸುನಿಲ್ ಆಳ್ವ,ಮಾಜೀ ಮುಖ್ಯಾಧಿಕಾರಿ ಡಾ. ಹರೀಶ್ಚಂದ್ರ ಪಿ ಸಾಲ್ಯಾನ್, ರಂಗಕರ್ಮಿ ಚಂದ್ರಶೇಖರ ಸುವರ್ಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯ ಸುಂದರ್ ರಾಜ್, ಮುಲ್ಕಿ ವಲಯ ಪತ್ರಕರ್ತರ ಸಂಘದ ಅಧ್ಯಕ್ಷ ನಿಶಾಂತ್ ಶೆಟ್ಟಿ ಕಿಲೆಂಜೂರು ಮತ್ತಿತರರು ಉಪಸ್ಥಿತರಿದ್ದು ಯಶಸ್ವಿಗೊಳಿಸುವ ಬಗ್ಗೆ ಮಾತನಾಡಿದರು.
ವಿನೋದ್ ಸಾಲ್ಯಾನ್ ಬೆಳ್ಳಾಯರು ನಿರೂಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…

12 hours ago

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…

13 hours ago

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು…

13 hours ago

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…

1 day ago

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…

1 day ago

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…

1 day ago