ಮಂಚಿ – ಕೊಳ್ನಾಡು ಪ್ರೌಢಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಎರಡನೇ ವರ್ಷದ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಮತ್ತು ಕ್ರೀಡಾಕೂಟವು ಇದೇ ಬರುವ ಡಿ. 17 ರಂದು ನಡೆಯಲಿದೆ.

ಈ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಹಿರಿಯ ವಿದ್ಯಾರ್ಥಿ ಸಂಘದ ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಗಿದೆ.ಈ ವೇಳೆ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಮ್ ಪ್ರಸಾದ್ ರೈ ತಿರುವಾಜೆ ಅವರು ಮಾತನಾಡಿ “ಬಾಲ್ಯದ ಸವಿನೆನಪುಗಳೊಂದಿಗೆ ಎಲ್ಲರನ್ನೂ ಒಗ್ಗೂಡಿಸುವ, ಒತ್ತಡ ಮುಕ್ತ ಬದುಕಿಗೊಂದು ಮುನ್ನುಡಿ ಇಡುವ ಪ್ರಯತ್ನ ಇಲ್ಲಿ ಸಾಗ್ತಾ ಇದೆ ಅಂತ ಹೇಳಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಕೋಶಾಧಿಕಾರಿಯಾದ, ದಡ್ಡಲ ಕಾಡು ಪ್ರೌಢಶಾಲಾ ಮುಖ್ಯ ಶಿಕ್ಷಕ ರಮಾನಂದ ನೂಜಿಪ್ಪಾಡಿ, ಮಂಚಿ ಕೊಳ್ನಾಡು ಪ್ರೌಢ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣ ಸೆರ್ಕಳ, ಹಳೆ ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.





