ಕಟೀಲು : ಹಿಮಾಲಯದಲ್ಲಿ ಹುಟ್ಟಿದ ನೀರು ರೈತನ ಗದ್ದೆಗೆ ಹರಿದು ಫಲ ಕೊಡುವಂತೆ, ಬಾಷೆಯ ಉಪಯೋಗ ಉತ್ತಮವಾಗಿರಲಿ ಎಂದು ಕೆ. ಪಿ. ರಾವ್ ಹೇಳಿದರು. ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ಸಮೂಹ ಶಿಕ್ಷಣ ಸಂಸ್ಥೆಗಳ ಅಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಭ್ರಮರ ಇಂಚರ ನುಡಿಹಬ್ಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಟೀಲು ಪದವಿ ಕಾಲೇಜಿನಿಂದ ಸಮ್ಮೇಳನ ನಡೆಯುವ ಪದವಿ ಪೂರ್ವ ಕಾಲೇಜಿನವರೆಗೆ ಮೆರವಣಿಗೆ ನಡೆಯಿತು, ಮೆರವಣಿಗೆಯಲ್ಲಿ ಭಗವತ್ ಗೀತೆಯನ್ನು ಪಲ್ಲಕ್ಕಿಯಲ್ಲಿ ಹೊತ್ತು ಬಂದು ವಿಶೇಷ ಗೌರವ ಸಲ್ಲಿಸಲಾಯಿತು. ವಿವಿಧ ವೇಷಗಳು, ವಿದ್ಯಾರ್ಥಿಗಳು ಮೆರವಣಿಗೆಗೆ ಸಾಥ್ ನೀಡಿದರು.
ಹಳೆವಿದ್ಯಾರ್ಥಿ ಶೇಖರ ಪೂಜಾರಿ ಮೆರವಣಿಗೆಯನ್ನು ಉದ್ಘಾಟಿಸಿದರು. ಜನಪದ ವಸ್ತುಸಂಗ್ರಹಾಲಯವನ್ನು ಆನಂದ ಸಿ ಕುಂದರ್ ಉದ್ಘಾಸಿದರು, ಕಾರ್ಯಕ್ರಮದಲ್ಲಿ ಸಾಹಿತಿ ಪಾದೆಕಲ್ಲು ವಿಷ್ಣು ಭಟ್, ಪವನಜ. ದೇವಳದ ಆಡಳಿತ ಮಂಡಳಿ ಅಧ್ಯಕ್ಣ ಸನತ್ ಕುಮಾರಗ ಶೆಟ್ಟಿ, ದೇವಳದ ಪ್ರಧಾನ ಅರ್ಚಕ ಲಕ್ಷೀನಾರಾಯಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರುಗಳಾದ ಲೋಕಯ್ಯ ಸಾಲಿಯಾನ್, ಕಿರಣ್ ಕುಮಾರ್ ಶೆಟ್ಟಿ, ಗ್ರೆಗರಿನ್ ತಾವ್ರೋ, ಉಪಾಧ್ಯಕ್ಷರುಗಳಾದ ಭಾರತಿ, ಸುರೇಶ್, ಬಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.
ಪದವಿ ಕಾಲೇಜಿನ ಪ್ರಾಂಶುಪಾಲ ಕೃಪ್ಣ ಕಾಂಚಾನ್, ಪದವೀ ಪೂರ್ವ ಕಾಲೇಜಿನ ಪ್ರಾಂಶುಪಾಲ ಕುಸುಮಾವತಿ, ಪ್ರಾರ್ಥಮಿಕ ಶಾಲೆಯ ಮುಖ್ಯೋಪದ್ಯಾನಿ ಸರೋಜಿನಿ, ಅಂಗ್ಲ ಮಾದ್ಯಮ ಶಾಲೆಯ ಮುಖೋಪದ್ಯಾಯ ಚಂದ್ರಶೀಖರ ಭಟ್, ಪ್ರಧಾನ ಅರ್ಚಕ ಹರಿನಾರಾಯಣ ದಾಸ ಆಸ್ರಣ್ಣ ಸ್ವಾಗತಿಸಿ, ಡಾ.ಕೃಷ್ಣ ಧನ್ಯವಾದ ಸಮರ್ಪಿಸಿದರು. ಉಪಪ್ರಾಶುಂಪಾಲ ರಾಜಶೇಖರ್ ಕಾರ್ಯಕ್ರಮ ನಿರೂಪಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…