ಪುಂಜಾಲಕಟ್ಟೆ : ಶಾಲಾ ಬಾಲಕನೋರ್ವ ಸೈಕಲ್ ಕಳ್ಳತನ ಮಾಡಿ ಮಾರಾಟ ಮಾಡಿರುವುದಾಗಿ ಆರೋಪಿಸಿ ಶಾಲೆಯಲ್ಲಿ ಶಾಲಾ ಮೇಲುಸ್ತುವಾರಿ ಅಧ್ಯಕ್ಷ ಬಾಲಕನಿಗೆ ಹಲ್ಲೆ ಗೈದಿದ್ದು, ಬಾಲಕ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ನ.೩೦ ರಂದು ಸಂಭವಿಸಿದೆ.
ಸಂತ್ರಸ್ಥ ಬಾಲಕ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿಕೊಂಡಿದ್ದು, ಬಾಲಕನು ಸೈಕಲನ್ನು ಮಾರಾಟ ಮಾಡಿದ ವಿಚಾರಕ್ಕೆ ಸಂಬಂದಿಸಿದಂತೆ ನ.28ರಂದು ಬೆಳಗ್ಗೆ ಶಾಲೆಯಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷಆರೋಪಿತ ಪರಮೇಶ ಎಂಬಾತ ಬಾಲಕನನ್ನು ವಿಚಾರಿಸಿ ಬಾಲಕನ ತಾಯಿಯ ಸಮಕ್ಷಮದಲ್ಲಿ ಬಾಲಕನಿಗೆ ಸಣ್ಣ ದೊಣ್ಣೆಯಿಂದ ಹಾಗೂ ಕೈಯಿಂದ ಹೊಡೆದಿರುತ್ತಾನೆ
. ಈ ವೇಳೆ ಶಾಲಾ ಶಿಕ್ಷಕರಾದ ಪ್ರಮೀಳಾ ಮತ್ತು ರಮೇಶ್ ಎಂಬವರು ಬಾಲಕನಿಗೆ ಹೊಡೆಯಲು ಪ್ರೇರೇಪಿಸಿರುತ್ತಾರೆ. ಹಲ್ಲೆ ನಡೆಸಿದ ಬಳಿಕ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಸೈಕಲ್ ಕದ್ದು ಮಾರಾಟ ಮಾಡಿದ ಬಗ್ಗೆ ಕೇಸು ಹಾಕುವುದಾಗಿ ಬೆದರಿಕೆ ಹಾಕಿದ್ದು, ಶಾಲೆಯಲ್ಲಿ ನಡೆದ ಹಲ್ಲೆಯಿಂದ ನ.30ರಂದು ಬೆಳಗ್ಗೆ ಬಾಲಕನಿಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಂಡಿರುತ್ತಾರೆ ಎಂಬುದಾಗಿ ಸಂತ್ರಸ್ಥ ಬಾಲಕನು ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಬಾಲನ್ಯಾಯ ಕಾಯಿದೆ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…