ಜನ ಮನದ ನಾಡಿ ಮಿಡಿತ

Advertisement

ಲಯನ್ಸ್ ಸೇವಾ ಮಂದಿರದಲ್ಲಿ ಬಿಎಂಎಸ್ ರಿಕ್ಷಾ ಚಾಲಕ‌ & ಮಾಲಕರ ಸಂಘ ತಾಲೂಕು ಸಮಿತಿ ಬಂಟ್ವಾಳ ಇದರ 35 ನೇ ಮಹಾ ಸಭೆ

ಬಂಟ್ವಾಳ: ಬಿಎಂಎಸ್ ರಿಕ್ಷಾ ಚಾಲಕ‌ & ಮಾಲಕರ ಸಂಘ ತಾಲೂಕು ಸಮಿತಿ ಬಂಟ್ವಾಳ ಇದರ 35 ನೇ ಮಹಾ ಸಭೆ ಲಯನ್ಸ್ ಸೇವಾ ಮಂದಿರದಲ್ಲಿ ಇಂದು ನಡೆಯಿತು.


ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಪ್ರಾದೇಶಿಕ ಸಾರಿಕೆ ಅಧಿಕಾರಿ ಚರಣ್ ಅವರು ಮಾತನಾಡಿ, ಕಾನೂನು ವ್ಯಾಪ್ತಿಯನ್ನು ಮೀರದೆ, ವೃತ್ತಿಯನ್ನು ಪ್ರೀತಿಸಿ ಎಂದು ಅವರು ಹೇಳಿದರು. ಸಂಘಟನೆಯ ಮೂಲಕ ಸಂಘಟಿತರಾಗಿ, ಸಾರ್ವಜನಿಕ ಸೇವೆಯ ಮೂಲಕ ಇತರರಿಗೆ ಮಾದರಿಯಾಗಿ ಎಂದು ಅವರು ತಿಳಿಸಿದರು.


ಮುಖ್ಯ ಅತಿಥಿಯಾಗಿದ್ದ ಟ್ರಾಫಿಕ್ ಪೋಲಿಸ್ ಸಭ್ ಇನ್ಸಪೆಕ್ಟರ್ ಸುತೇಷ್ ಕೆ.ಪಿ ಅವರು ಮಾತನಾಡಿ, ಟ್ರಾಫಿಕ್ ನಿಯಮಗಳನ್ನು ಪಾಲನೆ ಮಾಡಿದರೆ, ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತದೆ. ಸದಾ ಎಲ್ಲರ ಕಷ್ಟಗಳಿಗೆ ಹತ್ತಿರದ ಸೇವಕರಾಗಿರುವ ರಿಕ್ಷಾ ಚಾಲಕರು, ವಿಶ್ವಾಸದ ಸೇವೆಯನ್ನು ನೀಡುತ್ತಿದ್ದಾರೆ. ಹಾಗಾಗಿ ರಿಕ್ಷಾ ಚಾಲಕರು ಸಾರ್ವಜನಿಕ ವಲಯದಲ್ಲಿ ಗೌರವವನ್ನು ಉಳಿಸಿಕೊಂಡಿದ್ದಾರೆ ಎಂದರು.


ಕಾರ್ಯಕ್ರಮ ಅಧ್ಯಕ್ಷತೆಯನ್ನು ಬಿಎಂಎಸ್ ಬಂಟ್ವಾಳ ರಿಕ್ಷಾ ಚಾಲಕ – ಮಾಲಕ ಸಂಘದ ಅಧ್ಯಕ್ಷ ವಿಶ್ವನಾಥ ಚಂಡ್ತಿಮಾರ್ ವಹಿಸಿದ್ದರು.


ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿ ಸುರೇಶ್ ಸಾಲಿಯಾನ್, ಬಿಎಂಎಸ್ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ಬಿಎಂಎಸ್ ‌ಜಿಲ್ಲಾಧ್ಯಕ್ಷರು ವಕೀಲ ಅನಿಲ್ ಕುಮಾರ್,ಬಿಎಂಎಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ‌ಮಣಿಹಳ್ಳ,ಮೋಟಾರ್ ಜನರಲ್ ಮಜ್ದೂರ್ ಸಂಘ ದ ಜಿಲ್ಲಾ ಉಪಾಧ್ಯಕ್ಷ ನಾರಾಯಣ ಪೂಜಾರಿ ಉಪಸ್ಥಿತರಿದ್ದರು. ಉಮಾಶಂಕರ್ ಅವರು ಕಾರ್ಯಕ್ರಮ ‌ನಿರೂಪಿಸಿ ವಂದಿಸಿದರು. ಬಿಎಂಎಸ್ ರಿಕ್ಷಾ ಚಾಲಕ ಮಾಲಕ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಕ್ರಷ್ಣ ಕುಮಾರ್ ಅವರು ಸಹಕರಿಸಿದರು.
ರಿಕ್ಷಾ ಚಾಲಕರಾಗಿ ಸುದೀರ್ಘ ಅವಧಿಯಲ್ಲಿ ಸೇವೆ ಸಲ್ಲಿಸಿ, ಸಂಘದ ವಿವಿಧ ಹುದ್ದೆಯನ್ನು ಅಲಂಕರಿಸಿ, ಇದೀಗ ನರಿಕೊಂಬು ಗ್ರಾ.ಪಂ.ಅಧ್ಯಕ್ಷರಾಗಿ ಆಯ್ಕೆಯಾದ ಸಂತೋಷ್ ಕುಮಾರ್, ರಿಕ್ಷಾ ಚಾಲಕರಾಗಿದ್ದಕೊಂಡು ಸತತ ಮೂರನೇ ಬಾರಿ ಅಮ್ಟಾಡಿ ಗ್ರಾ.ಪಂ.ಸದಸ್ಯರಾಗಿ ಆಯ್ಕೆಯಾದ ವಿಶ್ವನಾಥ ಕಲಾಯಿ, ರಿಕ್ಷಾ ಚಾಲಕರಾಗಿದ್ದಕೊಂಡು ನಾವೂರ ಗ್ರಾ.ಪಂ.ನ.ಎರಡನೇ ಅವಧಿಗೆ ಸದಸ್ಯರಾಗಿ ಆಯ್ಕೆಯಾದ ಜನಾರ್ಧನ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು.
ಕರಾಟೆಯಲ್ಲಿ ರಾಷ್ಟ ಮಟ್ಟದಲ್ಲಿ ಚಿನ್ನದ ಪದಕ ಪಡೆದ ಬಿ.ಎಂ.ಎಸ್.ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ಮಣಿಹಳ್ಳ ಅವರ ಮಗ 8 ವರ್ಷದ ಗುರುವಿಷ್ಣು ಅವರನ್ನು ಗೌರವಿಸಲಾಯಿತು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!